24.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿ

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

ಗೇರುಕಟ್ಟೆ :ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣಾ ಕಾರ್ಯಕ್ರಮವು ಜೂ 17.ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ನಡೆಯಿತು

. ಕಳಿಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಬಿ. ಶೆಟ್ಟಿ ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಮುದ್ದುಂಜ ಇವರ ನೇತೃತ್ವದಲ್ಲಿ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. , ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದಿರಾ ಮಾತನಾಡಿ ವಿದ್ಯೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ನೀಡಿರುವಂತಹ ಉಚಿತ ನೋಟ್ ಪುಸ್ತಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪರಿಣಾಮಕಾರಿಯಾಗಲಿ ಎಂದು ಹಾರೈಸಿದರು. ಎಸ್. ಡಿ.ಎಂ. ಸಿ. ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸುಂದರ ಭಾರತ ಪ್ರತಿಷ್ಠಾನದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಈಶ್ವರಿ ಕೆ. ಇವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಂಘ ಸಂಸ್ಥೆಗಳವರು ನೀಡುವ ಇಂತಹ ಕೊಡುಗೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿವೆ. ಇನ್ನೂ ಹೆಚ್ಚಿನ ಸಹಕಾರ ಸಂಘ-ಸಂಸ್ಥೆಗಳಿಂದ, ಊರ ದಾನಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ದೊರೆಯಲಿ ಎಂದು ಹಾರೈಸಿ, ಸುಂದರ ಭಾರತ ಪ್ರತಿಷ್ಠಾನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಶಾಲಾ ಶಿಕ್ಷಕರು ಪ್ರತಿಷ್ಠಾನದವರಿಗೆ ಕೃತಜ್ಞತೆಗಳನ್ನು ತಿಳಿಸುತ್ತಾ ಪುಸ್ತಕ ವಿತರಣೆಗೆ ಸಹಕರಿಸಿದರು.

Related posts

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya
error: Content is protected !!