23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

ಗೇರುಕಟ್ಟೆ :ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣಾ ಕಾರ್ಯಕ್ರಮವು ಜೂ 17.ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ನಡೆಯಿತು

. ಕಳಿಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಬಿ. ಶೆಟ್ಟಿ ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಮುದ್ದುಂಜ ಇವರ ನೇತೃತ್ವದಲ್ಲಿ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. , ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದಿರಾ ಮಾತನಾಡಿ ವಿದ್ಯೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ನೀಡಿರುವಂತಹ ಉಚಿತ ನೋಟ್ ಪುಸ್ತಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪರಿಣಾಮಕಾರಿಯಾಗಲಿ ಎಂದು ಹಾರೈಸಿದರು. ಎಸ್. ಡಿ.ಎಂ. ಸಿ. ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸುಂದರ ಭಾರತ ಪ್ರತಿಷ್ಠಾನದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಈಶ್ವರಿ ಕೆ. ಇವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಂಘ ಸಂಸ್ಥೆಗಳವರು ನೀಡುವ ಇಂತಹ ಕೊಡುಗೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿವೆ. ಇನ್ನೂ ಹೆಚ್ಚಿನ ಸಹಕಾರ ಸಂಘ-ಸಂಸ್ಥೆಗಳಿಂದ, ಊರ ದಾನಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ದೊರೆಯಲಿ ಎಂದು ಹಾರೈಸಿ, ಸುಂದರ ಭಾರತ ಪ್ರತಿಷ್ಠಾನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಶಾಲಾ ಶಿಕ್ಷಕರು ಪ್ರತಿಷ್ಠಾನದವರಿಗೆ ಕೃತಜ್ಞತೆಗಳನ್ನು ತಿಳಿಸುತ್ತಾ ಪುಸ್ತಕ ವಿತರಣೆಗೆ ಸಹಕರಿಸಿದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya
error: Content is protected !!