24 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

ಉಜಿರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ಸಾಗಿತು.

ಜಾಥಾಕ್ಕೆ ವಕೀಲರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ವಸಂತ ಮರಕಡ ಚಾಲನೆ ನೀಡಿದರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಿರಸಿ ಪರಿಸರ ಬರಹಗಾರ, ಪರಿಸರ ತಜ್ಞ ಶಿವಾನಂದ ಕಳವೆ ದೀಪ ಪ್ರಜ್ವಲಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ‌.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ‌.ಅಶೋಕ್ ಕುಮಾರ್ ವಹಿಸಿದ್ದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳಪುಳೆ,ಎಸ್.ಡಿ.ಎಂ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಿದರು.

ಎಸ್.ಡಿ.ಎಂ ಸೆಕಂಡರಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಪ್ರಾಧ್ಯಾಪಕ ಡಾ.ಶ್ರೀಧರ ಭಟ್ಟ ಕಾರ್ಯಕ್ರಮ ನಿರೂಪಿಸಿದರು. ಶ್ರೀ.ಧ.ಮಂ.ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ ವಿಶ್ವನಾಥ ಸ್ವಾಗತಿಸಿದರು.ಬಳಿಕ ಎಸ್.ಡಿ.ಎಂ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Related posts

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya
error: Content is protected !!