24 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

ಕಕ್ಕಿಂಜೆ: ಇಲ್ಲಿಯ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರುವಾಸಿಯಾದ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನಾ ಸಮಾರಂಭವು ಜೂ.17 ರಂದು ನಡೆಯಿತು.

ಮಂಗಳೂರು ಕೆಎಂಸಿ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್, ವೈದ್ಯಕೀಯ ಅಧೀಕ್ಷಕರು ಡಾ| ಚಕ್ರಪಾಣಿ ಎಂ.ಉದ್ಘಾಟಿಸಿ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಐಎಂಎ ಅಧ್ಯಕ್ಷರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಡಾ| ಸ್ವರ್ಣಲತಾ ರವರು ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ನ್ನು ಉದ್ಘಾಟಿಸಿದರು. ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ನ ಮುಖ್ಯ ಇನ್ಫರ್ಟಿಲಿಟಿ ಕನ್ಸಲ್ವೆಂಟ್ ಡಾ| ಗೌರವ್ ಗುಜರಾತಿ ರವರು ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟಿಸಿದರು.

ಬೆಳ್ತಂಗಡಿ ತುಳು ಶಿವಳ್ಳಿ ಸಭಾದ ಅಧ್ಯಕ್ಷ ರಾಜಪ್ರಸಾದ ಪೊಳ್ನಾಯ, ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ , ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಡಾ. ವಂದನಾ ಎಂ. ಇರ್ವತ್ರಾಯ,ಆಡಳಿತಧಿಕಾರಿ ಜ್ಯೋತಿ ವಿ ಸ್ವರೂಪ್ ಉಪಸ್ಥಿತರಿದ್ದರು.

ಆಸ್ಪತ್ರೆಯು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ,ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆಯಲ್ಲಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಡಾ.ಮುರಳಿಕೃಷ್ಣ ಇರ್ವತ್ರಾಯ ಸ್ವಾಗತಿಸಿ,ಆರೀಸ್ ಕಾರ್ಯಕ್ರಮ ನಿರೂಪಿಸಿದರು. ಡಾ.ವಂದನಾ ಎಂ ವಂದಿಸಿದರು. ಡಾ.ಆಲ್ಬಿನ್ ಜೋಸೆಫ್ ಸನ್ಮಾನಿತರ ಪರಿಚಯ ವಾಚಿಸಿದರು.

Related posts

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
error: Content is protected !!