24 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

ವೇಣೂರು: ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜೂ. 17 ರಂದು ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿ, ಪಲ್ಲಂದೋಡಿ ಬಜಿರೆಯಲ್ಲಿ “ಸಂಸ್ಕಾರ ಸಿಂಧೂರ” ಎಂಬ ಕಾರ್ಯಕ್ರಮದಡಿ ಸನಾತನ ಸಂಸ್ಕೃತಿಯ ಮೆಲುಕು -ಚಿಂತನ ಮಂಥನ ಕಾರ್ಯಕ್ರಮ ಆರಂಭಗೊಂಡಿತು.

ಜಂತೋಡಿಗುತ್ತು ಪ್ರವೀಣ್ ಚಂದ್ರ ಜೈನ್ ರವರಿಂದ ದೀಪೋಜ್ವಲನದ ಮೂಲಕ ಉದ್ಘಾಟನೆಯಾದ ಕಾರ್ಯಕ್ರಮದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲೆ ಯ ಅಧ್ಯಕ್ಷ ತಾರಾನಾಥ ಕೊಟ್ಟಾರಿ, ಫರೆಂಗಿಪೇಟೆ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಗೌರವಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ, ಸಂಸ್ಕಾರ ಭಾರತೀ ಕರ್ನಾಟಕ ಪ್ರಾಂತ ದ ಸಹ ಕಾರ್ಯದರ್ಶಿ ನಾಗರಾಜ ಶೆಟ್ಟಿ, ಮಂಗಳೂರು, ವೇಣೂರಿನ ಉದ್ಯಮಿಗಳಾದ ಭಾಸ್ಕರ್ ಪೈ, ಸಂಸ್ಕಾರ ಭಾರತೀ ದ.ಕ.ದ ಕೋಶ ಪ್ರಮುಖ್ ಶ್ರೀಮತಿ ವಿಜಯಾ ಬಿ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಥಮ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಜನನದಿಂದ ಮರಣದವರೆಗಿನ ಆಚರಣೆಗಳಲ್ಲಿನ ಬದಲಾವಣೆಗಳು ಎಂಬ ವಿಚಾರದಲ್ಲಿ ಚಿಂತನೆ ನಡೆಸಿದವರು ಸಾಮರಸ್ಯ ಟೋಳಿಯ ವಿಭಾಗ ಪ್ರಮುಖ್ ಸುರೇಶ್ ನರ್ಕಳ, ಸಂ‌.ಭಾ.ಕರ್ನಾಟಕ ಪ್ರಾಂತದ ಕೋಶ ಪ್ರಮುಖ್ ರಘುವೀರ್ ಗಟ್ಟಿ, ಸಂ.ಭಾ.ದ.ಕ ಜಿಲ್ಲೆಯ ಉಪಾಧ್ಯಕ್ಷ ದತ್ತಾತ್ರೇಯ ರಾವ್ ಪುತ್ತೂರು, ಸಂ.ಭಾ.ದ.ಕ.ಜಿಲ್ಲೆಯ ಸಾಹಿತ್ಯ ಸಂಯೋಜಕರಾದ ಶ್ರೀಮತಿ ಶಂಕರಿ ಶರ್ಮ ಪುತ್ತೂರು ಉಪಸ್ಥಿತರಿದ್ದರು.

ಸಂ.ಭಾ.ದ.ಕ.ಜಿಲ್ಲೆಯ ಕಾರ್ಯಕಾರಿಣಿ ಸದಸ್ಯ ಪಿ.ಎನ್.ಪರುಷೋತ್ತಮ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!