25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

ವೇಣೂರು: ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜೂ. 17 ರಂದು ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿ, ಪಲ್ಲಂದೋಡಿ ಬಜಿರೆಯಲ್ಲಿ “ಸಂಸ್ಕಾರ ಸಿಂಧೂರ” ಎಂಬ ಕಾರ್ಯಕ್ರಮದಡಿ ಸನಾತನ ಸಂಸ್ಕೃತಿಯ ಮೆಲುಕು -ಚಿಂತನ ಮಂಥನ ಕಾರ್ಯಕ್ರಮ ಆರಂಭಗೊಂಡಿತು.

ಜಂತೋಡಿಗುತ್ತು ಪ್ರವೀಣ್ ಚಂದ್ರ ಜೈನ್ ರವರಿಂದ ದೀಪೋಜ್ವಲನದ ಮೂಲಕ ಉದ್ಘಾಟನೆಯಾದ ಕಾರ್ಯಕ್ರಮದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲೆ ಯ ಅಧ್ಯಕ್ಷ ತಾರಾನಾಥ ಕೊಟ್ಟಾರಿ, ಫರೆಂಗಿಪೇಟೆ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಗೌರವಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ, ಸಂಸ್ಕಾರ ಭಾರತೀ ಕರ್ನಾಟಕ ಪ್ರಾಂತ ದ ಸಹ ಕಾರ್ಯದರ್ಶಿ ನಾಗರಾಜ ಶೆಟ್ಟಿ, ಮಂಗಳೂರು, ವೇಣೂರಿನ ಉದ್ಯಮಿಗಳಾದ ಭಾಸ್ಕರ್ ಪೈ, ಸಂಸ್ಕಾರ ಭಾರತೀ ದ.ಕ.ದ ಕೋಶ ಪ್ರಮುಖ್ ಶ್ರೀಮತಿ ವಿಜಯಾ ಬಿ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಥಮ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಜನನದಿಂದ ಮರಣದವರೆಗಿನ ಆಚರಣೆಗಳಲ್ಲಿನ ಬದಲಾವಣೆಗಳು ಎಂಬ ವಿಚಾರದಲ್ಲಿ ಚಿಂತನೆ ನಡೆಸಿದವರು ಸಾಮರಸ್ಯ ಟೋಳಿಯ ವಿಭಾಗ ಪ್ರಮುಖ್ ಸುರೇಶ್ ನರ್ಕಳ, ಸಂ‌.ಭಾ.ಕರ್ನಾಟಕ ಪ್ರಾಂತದ ಕೋಶ ಪ್ರಮುಖ್ ರಘುವೀರ್ ಗಟ್ಟಿ, ಸಂ.ಭಾ.ದ.ಕ ಜಿಲ್ಲೆಯ ಉಪಾಧ್ಯಕ್ಷ ದತ್ತಾತ್ರೇಯ ರಾವ್ ಪುತ್ತೂರು, ಸಂ.ಭಾ.ದ.ಕ.ಜಿಲ್ಲೆಯ ಸಾಹಿತ್ಯ ಸಂಯೋಜಕರಾದ ಶ್ರೀಮತಿ ಶಂಕರಿ ಶರ್ಮ ಪುತ್ತೂರು ಉಪಸ್ಥಿತರಿದ್ದರು.

ಸಂ.ಭಾ.ದ.ಕ.ಜಿಲ್ಲೆಯ ಕಾರ್ಯಕಾರಿಣಿ ಸದಸ್ಯ ಪಿ.ಎನ್.ಪರುಷೋತ್ತಮ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya
error: Content is protected !!