22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya
error: Content is protected !!