July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!