23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!