ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

ಪದ್ಮುಂಜ : ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ 2025ರ ಪ್ರಯುಕ್ತ “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ” ಎಂಬ ಧ್ಯೇಯದೊಂದಿಗೆ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ ಜೂ.17 ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಂಗಳೂರು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಗೊಟ್ಟು ವಹಿಸಿದರು.
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

777216

ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಡಾ| ಎಸ್. ಆರ್. ಹರೀಶ್ ಆಚಾರ್ಯ ವಿಷಯ ಮಂಡಿಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ , ದ. ಕ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೊ , ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್. ಎನ್. ರಘು , ಉಪ್ಪಿನಂಗಡಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕುಮಾರಿ ಹಸ್ತ ಶೆಟ್ಟಿ (ಪ್ರೊಬೇಶನರಿ), ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಉಪಸ್ಥಿತರಿದ್ದರು.

777216

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ. ಅಗರಿ, , ಬೆಂಗಳೂರು ಕ.ರಾ.ಸ.ಮ.ಮಂ. ನಿ. ಪ್ರಭಾರ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ, ಪದ್ಮುಂಜ ಪ್ರಾಥಮಿಕ ಕೃ.ಪ.ಸ. ಸಂಘದ ಉಪಾಧ್ಯಕ್ಷ ಅಶೋಕ ಪಿ., ಪದ್ಮುಂಜ ಪ್ರಾ. ಕೃ.ಪ.ಸ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ. , ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪದ್ಮಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ನಿರ್ದೇಶಕ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿ , ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ ಧನ್ಯವಾದವಿತ್ತರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya
error: Content is protected !!