24 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
error: Content is protected !!