25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya
error: Content is protected !!