25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!