23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya
error: Content is protected !!