22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು ಇನ್ನಷ್ಟು ಮರ, ಹಾಗೂ ಗುಡ್ಡ ಕುಸಿದು ಬೀಳುವ ಸಂಭವವಿದ್ದು ಮನೆಗೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರ್ಥಿಕ ಸಹಾಯ ನೀಡಿ, ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಪ್ರಮುಖರಾದ ಪ್ರಶಾಂತ್ ಗೌಡ ನಿರುoಬುಡ ಹಾಗೂ ಮನೆಯವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya
error: Content is protected !!