23.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿ

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

ಗೇರುಕಟ್ಟೆ :ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣಾ ಕಾರ್ಯಕ್ರಮವು ಜೂ 17.ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ನಡೆಯಿತು

. ಕಳಿಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಬಿ. ಶೆಟ್ಟಿ ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಮುದ್ದುಂಜ ಇವರ ನೇತೃತ್ವದಲ್ಲಿ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. , ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದಿರಾ ಮಾತನಾಡಿ ವಿದ್ಯೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ನೀಡಿರುವಂತಹ ಉಚಿತ ನೋಟ್ ಪುಸ್ತಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪರಿಣಾಮಕಾರಿಯಾಗಲಿ ಎಂದು ಹಾರೈಸಿದರು. ಎಸ್. ಡಿ.ಎಂ. ಸಿ. ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸುಂದರ ಭಾರತ ಪ್ರತಿಷ್ಠಾನದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಈಶ್ವರಿ ಕೆ. ಇವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಂಘ ಸಂಸ್ಥೆಗಳವರು ನೀಡುವ ಇಂತಹ ಕೊಡುಗೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿವೆ. ಇನ್ನೂ ಹೆಚ್ಚಿನ ಸಹಕಾರ ಸಂಘ-ಸಂಸ್ಥೆಗಳಿಂದ, ಊರ ದಾನಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ದೊರೆಯಲಿ ಎಂದು ಹಾರೈಸಿ, ಸುಂದರ ಭಾರತ ಪ್ರತಿಷ್ಠಾನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಶಾಲಾ ಶಿಕ್ಷಕರು ಪ್ರತಿಷ್ಠಾನದವರಿಗೆ ಕೃತಜ್ಞತೆಗಳನ್ನು ತಿಳಿಸುತ್ತಾ ಪುಸ್ತಕ ವಿತರಣೆಗೆ ಸಹಕರಿಸಿದರು.

Related posts

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!