23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

ಗೇರುಕಟ್ಟೆ :ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣಾ ಕಾರ್ಯಕ್ರಮವು ಜೂ 17.ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ನಡೆಯಿತು.

ಕಳಿಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಬಿ. ಶೆಟ್ಟಿ ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಮುದ್ದುಂಜ ಇವರ ನೇತೃತ್ವದಲ್ಲಿ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. , ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದಿರಾ ಮಾತನಾಡಿ ವಿದ್ಯೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ನೀಡಿರುವಂತಹ ಉಚಿತ ನೋಟ್ ಪುಸ್ತಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪರಿಣಾಮಕಾರಿಯಾಗಲಿ ಎಂದು ಹಾರೈಸಿದರು. ಎಸ್. ಡಿ.ಎಂ. ಸಿ. ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸುಂದರ ಭಾರತ ಪ್ರತಿಷ್ಠಾನದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಈಶ್ವರಿ ಕೆ. ಇವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಂಘ ಸಂಸ್ಥೆಗಳವರು ನೀಡುವ ಇಂತಹ ಕೊಡುಗೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿವೆ. ಇನ್ನೂ ಹೆಚ್ಚಿನ ಸಹಕಾರ ಸಂಘ-ಸಂಸ್ಥೆಗಳಿಂದ, ಊರ ದಾನಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ದೊರೆಯಲಿ ಎಂದು ಹಾರೈಸಿ, ಸುಂದರ ಭಾರತ ಪ್ರತಿಷ್ಠಾನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಶಾಲಾ ಶಿಕ್ಷಕರು ಪ್ರತಿಷ್ಠಾನದವರಿಗೆ ಕೃತಜ್ಞತೆಗಳನ್ನು ತಿಳಿಸುತ್ತಾ ಪುಸ್ತಕ ವಿತರಣೆಗೆ ಸಹಕರಿಸಿದರು.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya
error: Content is protected !!