September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಜೂ.೧೫ರಂದು ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿದ ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ. 17 ರಂದು ಭೇಟಿ ನೀಡಿದರು.


ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿ, ಅದೃಷ್ಟವಶಾತ್ ಬದುಕುಳಿದಿದ್ದಾರೆ.


ಈ ಪ್ರದೇಶ ಕುದುರೆಮುಖ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯಲ್ಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಅರಣ್ಯ ಇಲಾಖೆಯ ಕಾನೂನುಗಳು ಅಡ್ಡಿಯಾಗಿದೆ. ಈ ಪ್ರದೇಶದ ವೀಕ್ಷಣೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಸರ್ಕಾರದ ಕೊಂಡಿಯಾಗಿ ಕಾರ್ಯನಿರ್ವಹಿಸಲು ರಕ್ಷಿತ್ ಶಿವರಾಂ ಭೇಟಿ ನೀಡಿದ್ದಾರೆ. ಈ ಪ್ರದೇಶದಲ್ಲಿ ಸುಮಾರು ೯ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಸುಮಾರು ೬೦ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಈ ಪ್ರದೇಶಕ್ಕೆ ಸಂವಿಧಾನ ಬದ್ದ ಮೂಲಭೂತ ಸೌಕರ್ಯಗಳಾದ ವಿದ್ಯುತ್, ರಸ್ತೆ ಸಂಪರ್ಕವಿಲ್ಲದೆ ಒಂದುವರೆ ಶತಮಾನಗಳೇ ಕಳೆದಿದೆ. ರಕ್ಷಿತ್ ಶಿವರಾಂ ರವರ ಭೇಟಿ ಸವಣಾಲು ಗ್ರಾಮದ ಆದಿವಾಸಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪರಿಶಿಷ್ಟ ಪಂಗಡದ ತಾಲೂಕು ಅಧ್ಯಕ್ಷ, ಆದಿವಾಸಿ ಮುಖಂಡ ಜಯಾನಂದ ಪಿಲಿಕಲ, ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಗೌಡ ಸವಣಾಲು, ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ವಿನಯ್ ಕುಮಾರ್ ಉಜಿರೆ, ಬೂತ್ ಸಮಿತಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಮೋಹನ್ ರೈ ಸವಣಾಲು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರು, ಆದಿವಾಸಿ ಮುಖಂಡರು ಉಪಸ್ಥಿತರಿದ್ದರು.

Related posts

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!