23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ : ಓಡಿನ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಜೂ. 17 ರಂದು ಸಂಜೆ ನಡೆದಿದೆ.

ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ ಎಲೆಗಳನ್ನು , 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ, 26,778 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya
error: Content is protected !!