25.8 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

ಬೆಳ್ತಂಗಡಿ : ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ಧರ್ಮಪ್ರಾಂತ್ಯದ ಎಲ್ಲಾ ಧರ್ಮಗುರುಗಳೊಂದಿಗೆ ವಿಶೇಷ ಪೂಜೆ ಪ್ರಾರ್ಥನೆಗಳನ್ನು ಸಲ್ಲಿಸಿದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ತೀವ್ರ ಕಳವಳ ವ್ಯಕ್ತಪಡಿಸಿದರು.

ದ.ಕ. ಬೆಳ್ತಂಗಡಿ ಪ್ರದೇಶದಿಂದ ಬಹಳಷ್ಟು ಸಹೋದರ -ಸಹೋದರಿಯರು ಇಸ್ರೇಲಿನಲ್ಲಿ ಉದ್ಯೋಗದಲ್ಲಿರುವುದು ಹಾಗೂ ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ವಿಶೇಷ ಕಾಳಜಿ ವ್ಯಕ್ತಪಡಿಸಿದ ಧರ್ಮಾಧ್ಯಕ್ಷರು “ಶಾಂತಿಗಾಗಿ ಎಲ್ಲರು ಪ್ರಾರ್ಥಿಸಬೇಕು, ಯುದ್ಧದ ಭೀತಿ ಅಗಲಿಹೋಗಲಿ. ಈ ಸಂಕಟದ ಸಂದರ್ಭದಲ್ಲಿ ನಾವು ಎರಡೂ ರಾಷ್ಟ್ರಗಳ ಜನತೆಗೆ ಮಾನವೀಯ ಸಹಾಯ ನೀಡುವಂತೆ ಜಾಗತಿಕ ಸಮುದಾಯವನ್ನು ವಿನಂತಿಸುತ್ತೇವೆ.’ ಹೇಳಿದರು.

ಇಸ್ರೇಲ್ ಮತ್ತು ಇರಾನ್ ನಡುವಿನ ತೀವ್ರತೆಯಿಂದ ಉಂಟಾಗಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಂತಿ ಮತ್ತು ಮಾನವ ಹಕ್ಕುಗಳ ವೇದಿಕೆ ತನ್ನ ಗಂಭೀರ ಚಿಂತೆಗಳನ್ನು ವ್ಯಕ್ತಪಡಿಸುತ್ತಿದೆ. ಈ ಯುದ್ಧದಿಂದ ಮಾತ್ರ ಆ ಪ್ರದೇಶದಲ್ಲಿ ಮಾತ್ರವಲ್ಲದೆ, ಜಾಗತಿಕವಾಗಿ ಶಾಂತಿ, ಭದ್ರತೆ ಮತ್ತು ಆರ್ಥಿಕ ಸ್ಥಿರತೆಗೂ ಅಪಾಯ ಉಂಟಾಗಿದೆ.
ಯುದ್ಧದಲ್ಲಿ ಶೇಕಡಾವಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿ ಪರದಾಡುತ್ತಿದ್ದಾರೆ. ಹಾಸ್ಪಿಟಲ್, ಶಾಲೆಗಳು ಮತ್ತು ನಾಗರಿಕ ಸೌಲಭ್ಯಗಳು ಧ್ವಂಸವಾಗುತ್ತಿವೆ. ಇಂತಹ ಹಿಂಸಾತ್ಮಕ ಕೃತ್ಯಗಳು ಯಾವ ಕಾರಣಕ್ಕೂ ಸಮರ್ಥನೀಯವಲ್ಲ.ಯುದ್ಧವು ಯಾವುದೇ ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ. ಮಾತುಕತೆ, ಸಂವಾದ ಮತ್ತು ಪರಸ್ಪರ ಗೌರವವೇ ಶಾಶ್ವತ ಶಾಂತಿಯ ಮಾರ್ಗವಾಗಿದೆ. ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಫಾ. ಸುನಿಲ್ ಐಸಾಕ್ ತಿಳಿಸಿದರು. ಈ ಸಂಕಟದ ಸಂದರ್ಭದಲ್ಲಿ ನಾವು ಎರಡೂ ರಾಷ್ಟ್ರಗಳ ಜನತೆಗೆ ಮಾನವೀಯ ಸಹಾಯ ನೀಡುವಂತೆ ಜಾಗತಿಕ ಸಮುದಾಯವನ್ನು ವಿನಂತಿಸುತ್ತೇವೆ.

Related posts

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya
error: Content is protected !!