September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಜೂ.೧೫ರಂದು ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿದ ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ. 17 ರಂದು ಭೇಟಿ ನೀಡಿದರು.


ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿ, ಅದೃಷ್ಟವಶಾತ್ ಬದುಕುಳಿದಿದ್ದಾರೆ.


ಈ ಪ್ರದೇಶ ಕುದುರೆಮುಖ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯಲ್ಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಅರಣ್ಯ ಇಲಾಖೆಯ ಕಾನೂನುಗಳು ಅಡ್ಡಿಯಾಗಿದೆ. ಈ ಪ್ರದೇಶದ ವೀಕ್ಷಣೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಸರ್ಕಾರದ ಕೊಂಡಿಯಾಗಿ ಕಾರ್ಯನಿರ್ವಹಿಸಲು ರಕ್ಷಿತ್ ಶಿವರಾಂ ಭೇಟಿ ನೀಡಿದ್ದಾರೆ. ಈ ಪ್ರದೇಶದಲ್ಲಿ ಸುಮಾರು ೯ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಸುಮಾರು ೬೦ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಈ ಪ್ರದೇಶಕ್ಕೆ ಸಂವಿಧಾನ ಬದ್ದ ಮೂಲಭೂತ ಸೌಕರ್ಯಗಳಾದ ವಿದ್ಯುತ್, ರಸ್ತೆ ಸಂಪರ್ಕವಿಲ್ಲದೆ ಒಂದುವರೆ ಶತಮಾನಗಳೇ ಕಳೆದಿದೆ. ರಕ್ಷಿತ್ ಶಿವರಾಂ ರವರ ಭೇಟಿ ಸವಣಾಲು ಗ್ರಾಮದ ಆದಿವಾಸಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪರಿಶಿಷ್ಟ ಪಂಗಡದ ತಾಲೂಕು ಅಧ್ಯಕ್ಷ, ಆದಿವಾಸಿ ಮುಖಂಡ ಜಯಾನಂದ ಪಿಲಿಕಲ, ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಗೌಡ ಸವಣಾಲು, ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ವಿನಯ್ ಕುಮಾರ್ ಉಜಿರೆ, ಬೂತ್ ಸಮಿತಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಮೋಹನ್ ರೈ ಸವಣಾಲು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರು, ಆದಿವಾಸಿ ಮುಖಂಡರು ಉಪಸ್ಥಿತರಿದ್ದರು.

Related posts

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya
error: Content is protected !!