ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಜೂ.18 ರಂದು ಬೆಳ್ತಂಗಡಿ ಕೋರ್ಟ್ ರಸ್ತೆಯ ವಿಘ್ನೇಶ್ ಸಿಟಿ ಕಟ್ಟಡದಲ್ಲಿ ಶುಭಾರಂಭಗೊಂಡಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ದೀಪ ಬೆಳಗಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ರಾವ್ ಮುಗುಳಿ, ಗುರುವಾಯನಕೆರೆ ವಿಕಾಸ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ ಉಪಸ್ಥಿತರಿದ್ದರು.

ನ್ಯಾಯವಾದಿ ಶೈಲೇಶ ಆರ್ ಠೋಸರ್ ಸ್ವಾಗತಿಸಿದರು. ಮಾಲಕರಾದ ಪ್ರೇಮನಾಥ್ ಅಚ್ಚಿನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿ, ವಂದಿಸಿದರು.