July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

ಬೆಳ್ತಂಗಡಿ : ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ಧರ್ಮಪ್ರಾಂತ್ಯದ ಎಲ್ಲಾ ಧರ್ಮಗುರುಗಳೊಂದಿಗೆ ವಿಶೇಷ ಪೂಜೆ ಪ್ರಾರ್ಥನೆಗಳನ್ನು ಸಲ್ಲಿಸಿದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ತೀವ್ರ ಕಳವಳ ವ್ಯಕ್ತಪಡಿಸಿದರು.

ದ.ಕ. ಬೆಳ್ತಂಗಡಿ ಪ್ರದೇಶದಿಂದ ಬಹಳಷ್ಟು ಸಹೋದರ -ಸಹೋದರಿಯರು ಇಸ್ರೇಲಿನಲ್ಲಿ ಉದ್ಯೋಗದಲ್ಲಿರುವುದು ಹಾಗೂ ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಕುರಿತು ವಿಶೇಷ ಕಾಳಜಿ ವ್ಯಕ್ತಪಡಿಸಿದ ಧರ್ಮಾಧ್ಯಕ್ಷರು “ಶಾಂತಿಗಾಗಿ ಎಲ್ಲರು ಪ್ರಾರ್ಥಿಸಬೇಕು, ಯುದ್ಧದ ಭೀತಿ ಅಗಲಿಹೋಗಲಿ. ಈ ಸಂಕಟದ ಸಂದರ್ಭದಲ್ಲಿ ನಾವು ಎರಡೂ ರಾಷ್ಟ್ರಗಳ ಜನತೆಗೆ ಮಾನವೀಯ ಸಹಾಯ ನೀಡುವಂತೆ ಜಾಗತಿಕ ಸಮುದಾಯವನ್ನು ವಿನಂತಿಸುತ್ತೇವೆ.’ ಹೇಳಿದರು.

ಇಸ್ರೇಲ್ ಮತ್ತು ಇರಾನ್ ನಡುವಿನ ತೀವ್ರತೆಯಿಂದ ಉಂಟಾಗಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಂತಿ ಮತ್ತು ಮಾನವ ಹಕ್ಕುಗಳ ವೇದಿಕೆ ತನ್ನ ಗಂಭೀರ ಚಿಂತೆಗಳನ್ನು ವ್ಯಕ್ತಪಡಿಸುತ್ತಿದೆ. ಈ ಯುದ್ಧದಿಂದ ಮಾತ್ರ ಆ ಪ್ರದೇಶದಲ್ಲಿ ಮಾತ್ರವಲ್ಲದೆ, ಜಾಗತಿಕವಾಗಿ ಶಾಂತಿ, ಭದ್ರತೆ ಮತ್ತು ಆರ್ಥಿಕ ಸ್ಥಿರತೆಗೂ ಅಪಾಯ ಉಂಟಾಗಿದೆ.
ಯುದ್ಧದಲ್ಲಿ ಶೇಕಡಾವಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿ ಪರದಾಡುತ್ತಿದ್ದಾರೆ. ಹಾಸ್ಪಿಟಲ್, ಶಾಲೆಗಳು ಮತ್ತು ನಾಗರಿಕ ಸೌಲಭ್ಯಗಳು ಧ್ವಂಸವಾಗುತ್ತಿವೆ. ಇಂತಹ ಹಿಂಸಾತ್ಮಕ ಕೃತ್ಯಗಳು ಯಾವ ಕಾರಣಕ್ಕೂ ಸಮರ್ಥನೀಯವಲ್ಲ.ಯುದ್ಧವು ಯಾವುದೇ ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ. ಮಾತುಕತೆ, ಸಂವಾದ ಮತ್ತು ಪರಸ್ಪರ ಗೌರವವೇ ಶಾಶ್ವತ ಶಾಂತಿಯ ಮಾರ್ಗವಾಗಿದೆ. ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಫಾ. ಸುನಿಲ್ ಐಸಾಕ್ ತಿಳಿಸಿದರು. ಈ ಸಂಕಟದ ಸಂದರ್ಭದಲ್ಲಿ ನಾವು ಎರಡೂ ರಾಷ್ಟ್ರಗಳ ಜನತೆಗೆ ಮಾನವೀಯ ಸಹಾಯ ನೀಡುವಂತೆ ಜಾಗತಿಕ ಸಮುದಾಯವನ್ನು ವಿನಂತಿಸುತ್ತೇವೆ.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya
error: Content is protected !!