September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು.

ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಬಂಡೀಪುರದ ಸಂಪನ್ಮೂಲ ವ್ಯಕ್ತಿಯಾಗಿ ರೋನಿತ್ ನಂಜಪ್ಪ ಮಾಹಿತಿ ನೀಡಿದರು. ಟ್ರೆಕ್ಕಿಂಗ್ ಗೈಡ್ ಗಳ ಸಂವಹನ ಕೌಶಲ್ಯ ಹಾಗೂ ರಾಷ್ಟ್ರೀಯ ಉದ್ಯಮನದ ಕುದುರೆಮುಖದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಜೂ. 24 25 ರಂದು ಟ್ರೆಕ್ಕಿಂಗ್ ಗೈಡ್ ಗಳ ತರಬೇತಿ ಕಾರ್ಯ ನಡೆಯಲಿದೆ.

ಈ ಸಂದರ್ಭದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಂ ಬಾಬು , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., , ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿ. ಶರ್ಮಿಷ್ಮಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya
error: Content is protected !!