July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು.

ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಬಂಡೀಪುರದ ಸಂಪನ್ಮೂಲ ವ್ಯಕ್ತಿಯಾಗಿ ರೋನಿತ್ ನಂಜಪ್ಪ ಮಾಹಿತಿ ನೀಡಿದರು. ಟ್ರೆಕ್ಕಿಂಗ್ ಗೈಡ್ ಗಳ ಸಂವಹನ ಕೌಶಲ್ಯ ಹಾಗೂ ರಾಷ್ಟ್ರೀಯ ಉದ್ಯಮನದ ಕುದುರೆಮುಖದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಜೂ. 24 25 ರಂದು ಟ್ರೆಕ್ಕಿಂಗ್ ಗೈಡ್ ಗಳ ತರಬೇತಿ ಕಾರ್ಯ ನಡೆಯಲಿದೆ.

ಈ ಸಂದರ್ಭದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಂ ಬಾಬು , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., , ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿ. ಶರ್ಮಿಷ್ಮಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.

Related posts

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya
error: Content is protected !!