22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು ಶಾಂತಿ ಸ್ವಸಹಾಯ ಸಂಘದ ವತಿಯಿಂದ ವಿತರಿಸಲಾಯಿತು.

ಜೊತೆಗೆ ಹೊಸದಾಗಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸ್ವಸಹಾಯ ಸಂಘದ ಸದಸ್ಯರು ಪ್ರಾಯೋಜಿಸಿದರು. ಸ್ವಸಹಾಯ ಸಂಘದ ಅಧ್ಯಕ್ಷ ವಿಜಯಕುಮಾರ್ , ಕಾರ್ಯದರ್ಶಿ ರಾಜು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಶಾಲಾ ಶುಲ್ಕವನ್ನು ನೀಡಿ ಶುಭ ಹಾರೈಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಶಾಂತಿ ಸ್ವಸಹಾಯ ಸಂಘದ ಸದಸ್ಯರ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.

ವಿಜಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ಉದಯಕುಮಾರ್ ವಂದಿಸಿದರು.
ಸಂಸ್ಥೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya
error: Content is protected !!