22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ ಸಖಿಯರಿಗೆ ಹಾಗೂ ಪ್ರಗತಿಪರ ರೈತರಿಗೆ ಎಣ್ಣೆ ತಾಳೆ ಬೆಳೆ ಬೇಸಾಯ ಹಾಗೂ ಇಲಾಖಾ ಯೋಜನೆಗಳ ಮಾಹಿತಿಯ ಮೆಗಾ ಡ್ರೈವ್ ಕಾರ್ಯಕ್ರಮ ಜೂ.19 ರಂದು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ನಡೆಯಿತು.

ಅಡಿಕೆ ಹಳದಿ ರೋಗ, ದರ ಕುಸಿತ , ಹವಾಮಾನ ವೈಪರೀತ್ಯದಿಂದ ಕೃಷಿಕರು ಹೈರಾಣಾದ ಬಳಿಕ ಪರ್ಯಾಯ ಬೆಳೆಯಾಗಿ ಕಾಫಿ ಕಾಳುಮೆಣಸು ಇನ್ನಿತರ ಬೆಳೆಗಳಂತೆ ತಾಳೆ ಬೆಳೆ ಪರಿಚಯವಾಗಿದ್ದು ತಾಳೆ ಬೇಸಾಯಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇತ್ತಿಚೀನ ದಿನಗಳಲ್ಲಿ ತಾಳೆ ಎಣ್ಣೆ ಬೆಲೆ ಏರಿಕೆಯಾಗಿ ಬೆಳೆಗಾರರಿಗೆ ಲಾಭದಾಯಕವಾಗಿದೆ. ಇದೀಗ ಹೊಸ ತಳಿ ತಾಳೆ ಬೆಳೆಯಲ್ಲಿ ಪರಿಚಯಿಸಲಾಗಿದೆ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಬೆಳ್ತಂಗಡಿ ತಾಳೆ ಬಾಳೆಗಾರರ ಸಂಘದ ಅಧ್ಯಕ್ಷ , ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಕೃಷ್ಣ ಭಟ್, 3ಎಫ್ ಆಯಿಲ್ ಪಾಮ್ ಕಂಪನಿಯ ಉಭಯ ಜಿಲ್ಲೆಗಳ ವ್ಯವಸ್ಥಾಪಕ ಕೃಷ್ಣ, ಪ್ರಗತಿಪರ ತಾಳೆ ಬಾಳೆಗಾರರ ಸುಂದರ್ ಶೆಟ್ಟಿ ಸುಲ್ಕೇರಿ, ಹೋಬಳಿ ತೋಟಗಾರಿಕಾ ಅಧಿಕಾರಿಗಳಾದ ಮಹಾವೀರ ಶೇಬಣ್ಣನವರ, ಮಂಜುನಾಥ್ ಬಿರಾದಾರ, ಭೀಮರಾಯ ಸೊಡ್ಡಗಿ, ಸಂಜೀವಿನಿ ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ವೀಣಾಶ್ರೀ, 3ಎಫ್ ಆಯಿಲ್ ಪಾಮ್ ಕಂಪನಿಯ ರಾಬರ್ಟ್ ಡಿಸೋಜ, ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya
error: Content is protected !!