September 6, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿರುತ್ತಾರೆ. ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ ಹೊಂದಿದ ಸಾಲಗಾರರ ಸಾಲಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಇವರಿಗೆ ನೀಡಲಾದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಮಂಜೂರಾತಿ ಮೇರೆಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸಿ. ಇವರ ಕುಟುಂಬದವರಿಗೆ ಸಾಲದಿಂದ ಋಣ ಮುಕ್ತಾಯಗೊಳಿಸಿದ ಖಾತ್ರಿ ಪತ್ರವನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ.ರಾಜಾರಾಮ ಕೆ.ಬಿ, ಜಯವಿಕ್ರಮ್ ಪಿ, ಪುರುಷರಕಟ್ಟೆ ಪ್ರಭಾರ ಶಾಖಾ ವ್ಯವಸ್ಥಾಪಕ ಪವನ್ ಕೆ ಉಪಸ್ಥಿತರಿದ್ದರು.


ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಈಗಾಗಲೇ ಈ ಯೋಜನೆಯ ಅನ್ವಯ 83 ಕುಟುಂಬಗಳಿಗೆ ರೂ.61,58,593/- ಮೊತ್ತದ ಸಾಲಗಾರರ ಮರಣ ನಿಧಿಯನ್ನು ನೀಡಿ ಅವಲಂಬಿತ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಸದ್ರಿ ಕುಟುಂಬಗಳನ್ನು ಋಣ ಮುಕ್ತಗೊಳಿಸಿ ಸಹಕಾರ ಕ್ಷೇತ್ರದಲ್ಲಿ ಅದ್ವೀತಿಯ ಸಾಧನೆಯನ್ನು ಮಾಡುತ್ತಿದೆ.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya
error: Content is protected !!