23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿರುತ್ತಾರೆ. ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ ಹೊಂದಿದ ಸಾಲಗಾರರ ಸಾಲಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಇವರಿಗೆ ನೀಡಲಾದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಮಂಜೂರಾತಿ ಮೇರೆಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸಿ. ಇವರ ಕುಟುಂಬದವರಿಗೆ ಸಾಲದಿಂದ ಋಣ ಮುಕ್ತಾಯಗೊಳಿಸಿದ ಖಾತ್ರಿ ಪತ್ರವನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ.ರಾಜಾರಾಮ ಕೆ.ಬಿ, ಜಯವಿಕ್ರಮ್ ಪಿ, ಪುರುಷರಕಟ್ಟೆ ಪ್ರಭಾರ ಶಾಖಾ ವ್ಯವಸ್ಥಾಪಕ ಪವನ್ ಕೆ ಉಪಸ್ಥಿತರಿದ್ದರು.


ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಈಗಾಗಲೇ ಈ ಯೋಜನೆಯ ಅನ್ವಯ 83 ಕುಟುಂಬಗಳಿಗೆ ರೂ.61,58,593/- ಮೊತ್ತದ ಸಾಲಗಾರರ ಮರಣ ನಿಧಿಯನ್ನು ನೀಡಿ ಅವಲಂಬಿತ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಸದ್ರಿ ಕುಟುಂಬಗಳನ್ನು ಋಣ ಮುಕ್ತಗೊಳಿಸಿ ಸಹಕಾರ ಕ್ಷೇತ್ರದಲ್ಲಿ ಅದ್ವೀತಿಯ ಸಾಧನೆಯನ್ನು ಮಾಡುತ್ತಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!