July 23, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿರುತ್ತಾರೆ. ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ ಹೊಂದಿದ ಸಾಲಗಾರರ ಸಾಲಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಇವರಿಗೆ ನೀಡಲಾದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಮಂಜೂರಾತಿ ಮೇರೆಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸಿ. ಇವರ ಕುಟುಂಬದವರಿಗೆ ಸಾಲದಿಂದ ಋಣ ಮುಕ್ತಾಯಗೊಳಿಸಿದ ಖಾತ್ರಿ ಪತ್ರವನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ.ರಾಜಾರಾಮ ಕೆ.ಬಿ, ಜಯವಿಕ್ರಮ್ ಪಿ, ಪುರುಷರಕಟ್ಟೆ ಪ್ರಭಾರ ಶಾಖಾ ವ್ಯವಸ್ಥಾಪಕ ಪವನ್ ಕೆ ಉಪಸ್ಥಿತರಿದ್ದರು.


ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಈಗಾಗಲೇ ಈ ಯೋಜನೆಯ ಅನ್ವಯ 83 ಕುಟುಂಬಗಳಿಗೆ ರೂ.61,58,593/- ಮೊತ್ತದ ಸಾಲಗಾರರ ಮರಣ ನಿಧಿಯನ್ನು ನೀಡಿ ಅವಲಂಬಿತ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಸದ್ರಿ ಕುಟುಂಬಗಳನ್ನು ಋಣ ಮುಕ್ತಗೊಳಿಸಿ ಸಹಕಾರ ಕ್ಷೇತ್ರದಲ್ಲಿ ಅದ್ವೀತಿಯ ಸಾಧನೆಯನ್ನು ಮಾಡುತ್ತಿದೆ.

Related posts

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya
error: Content is protected !!