September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಸಿಇಒ ಶ್ರೀ ರಾಜೇಶ್ ಫಡ್ಕೆ, ಇಂಡಸ್ಟ್ರಿ ಡೆವಲಪ್ಮೆಂಟ್ ಮತ್ತು ಸೇಲ್ಸ್ ಮ್ಯಾನೇಜರ್ ರೋಮಿನ್ ಬೋಸ್ ಮತ್ತು ರಾಮ ರಾವ್ ಕುಮಾರ್ ರವರು ಜೂ. 18 ರಂದು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಮತ್ತು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು. ಕಂಪನಿಯ CSR ನ ಅನುದಾನ ಪತ್ರವನ್ನು ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೊಕ್ಕಡ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್, ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಆರೈಕೆದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!