32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು.

ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಬಂಡೀಪುರದ ಸಂಪನ್ಮೂಲ ವ್ಯಕ್ತಿಯಾಗಿ ರೋನಿತ್ ನಂಜಪ್ಪ ಮಾಹಿತಿ ನೀಡಿದರು. ಟ್ರೆಕ್ಕಿಂಗ್ ಗೈಡ್ ಗಳ ಸಂವಹನ ಕೌಶಲ್ಯ ಹಾಗೂ ರಾಷ್ಟ್ರೀಯ ಉದ್ಯಮನದ ಕುದುರೆಮುಖದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಜೂ. 24 25 ರಂದು ಟ್ರೆಕ್ಕಿಂಗ್ ಗೈಡ್ ಗಳ ತರಬೇತಿ ಕಾರ್ಯ ನಡೆಯಲಿದೆ.

ಈ ಸಂದರ್ಭದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಂ ಬಾಬು , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., , ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿ. ಶರ್ಮಿಷ್ಮಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!