23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು.

ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಬಂಡೀಪುರದ ಸಂಪನ್ಮೂಲ ವ್ಯಕ್ತಿಯಾಗಿ ರೋನಿತ್ ನಂಜಪ್ಪ ಮಾಹಿತಿ ನೀಡಿದರು. ಟ್ರೆಕ್ಕಿಂಗ್ ಗೈಡ್ ಗಳ ಸಂವಹನ ಕೌಶಲ್ಯ ಹಾಗೂ ರಾಷ್ಟ್ರೀಯ ಉದ್ಯಮನದ ಕುದುರೆಮುಖದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಜೂ. 24 25 ರಂದು ಟ್ರೆಕ್ಕಿಂಗ್ ಗೈಡ್ ಗಳ ತರಬೇತಿ ಕಾರ್ಯ ನಡೆಯಲಿದೆ.

ಈ ಸಂದರ್ಭದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಂ ಬಾಬು , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., , ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿ. ಶರ್ಮಿಷ್ಮಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.

Related posts

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!