23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.

“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಉಜಿರೆ ನ್ಯಾಚುರೋಪತಿ ಕಾಲೇಜು ಪ್ರೊ| ಡಾ. ಹರ್ಷಿಣಿ ಉದ್ಘಾಟನೆಯನ್ನು ಮಾಡಿ ಮಾತನಾಡಿ ಪರಿಸರದಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಮತ್ತು ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉಂಟಾಗುವ ಪ್ರಯೋಜನಗಳನ್ನು ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ರಜಪೂತ್ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ. ಕೀರ್ತನ ಮತ್ತು ಡಾ. ವೈಷ್ಣವಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಸೀಮಾ ವಂದಿಸಿದರು. ದೈಹಿಕ ಶಿಕ್ಷಕ ಸಂಜೀವ ಕೆ ಕಾರ್ಯಕ್ರಮ ಸಂಘಟಿಸಿದರು.

Related posts

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!