23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.

“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಉಜಿರೆ ನ್ಯಾಚುರೋಪತಿ ಕಾಲೇಜು ಪ್ರೊ| ಡಾ. ಹರ್ಷಿಣಿ ಉದ್ಘಾಟನೆಯನ್ನು ಮಾಡಿ ಮಾತನಾಡಿ ಪರಿಸರದಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಮತ್ತು ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉಂಟಾಗುವ ಪ್ರಯೋಜನಗಳನ್ನು ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ರಜಪೂತ್ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ. ಕೀರ್ತನ ಮತ್ತು ಡಾ. ವೈಷ್ಣವಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಸೀಮಾ ವಂದಿಸಿದರು. ದೈಹಿಕ ಶಿಕ್ಷಕ ಸಂಜೀವ ಕೆ ಕಾರ್ಯಕ್ರಮ ಸಂಘಟಿಸಿದರು.

Related posts

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!