September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು ಶಾಂತಿ ಸ್ವಸಹಾಯ ಸಂಘದ ವತಿಯಿಂದ ವಿತರಿಸಲಾಯಿತು.

ಜೊತೆಗೆ ಹೊಸದಾಗಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸ್ವಸಹಾಯ ಸಂಘದ ಸದಸ್ಯರು ಪ್ರಾಯೋಜಿಸಿದರು. ಸ್ವಸಹಾಯ ಸಂಘದ ಅಧ್ಯಕ್ಷ ವಿಜಯಕುಮಾರ್ , ಕಾರ್ಯದರ್ಶಿ ರಾಜು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಶಾಲಾ ಶುಲ್ಕವನ್ನು ನೀಡಿ ಶುಭ ಹಾರೈಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಶಾಂತಿ ಸ್ವಸಹಾಯ ಸಂಘದ ಸದಸ್ಯರ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.

ವಿಜಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ಉದಯಕುಮಾರ್ ವಂದಿಸಿದರು.
ಸಂಸ್ಥೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya
error: Content is protected !!