September 6, 2026
ವರದಿಶಾಲಾ ಕಾಲೇಜು

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಜೂ. 19ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪೋಷಕರ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭಾ ವೇದಿಕೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಗಣಿತ ತಜ್ಞ ಹಾಗೂ ಪ್ರಸಕ್ತ ಕಾಯರ್ತಡ್ಕ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಾಕೂಬ್ ಎಸ್ ಕೊಯ್ಯೂರು, ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಪೋಷಕರೊಂದಿಗೆ ಸಂವಾದ ನಡೆಸಿದ ಯಾಕೂಬ್ ರವರು ಮಕ್ಕಳ ನಡತೆಯನ್ನು ಸರಿಪಡಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು, ಎಂತಹ ವ್ಯಕ್ತಿಯನ್ನು ಬದಲಿಸುವ ಶಕ್ತಿ ತಾಯಿಗಿದೆ, ಅನೇಕ ಸಾಧಕರು ಸಾಗಿದ ಕಷ್ಟದ ಹಾದಿಯನ್ನು ಮಕ್ಕಳಿಗೆ ತಿಳಿಸಿ ಕಷ್ಟದ ಬದುಕಿನ ಅರಿವನ್ನು ಮೂಡಿಸಬೇಕು ಎಂದು ಹಲವಾರು ಉದಾಹರಣೆಗಳ ಮೂಲಕ ಪೋಷಕರಿಗೆ ಮನವರಿಕೆ ಮಾಡಿದರು.

2025-26 ನೇ ಸಾಲಿನ ಶಾಲಾ ವಾರ್ಷಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ರವರು ಮಕ್ಕಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಯನ್ನಾಗಿಸುವುದು ಪೋಷಕರ ಕೈಯಲ್ಲಿದೆ ಎಂಬುದನ್ನು ಪ್ರಾತ್ಯಕ್ಷಿಕ ಚಟುವಟಿಕೆಯ ಮೂಲಕ ಪೋಷಕರಿಗೆ ವಿವರಿಸಿ ಮಗುವನ್ನು ಸರಿಯಾದ ದಾರಿಯಲ್ಲಿ ಬೆಳೆಸುವಲ್ಲಿ ಪೋಷಕರಿಗೆ ಮತ್ತು ಶಿಕ್ಷಕರಿಗೆ ದೇವರು ಮಾರ್ಗದರ್ಶನವನ್ನು ಮಾಡಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಇವರು ಶಾಲಾ ಅರೇಬಿಕ್ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿಷಯವಾರು ಸಂಘಗಳು ಮತ್ತು ಸ್ವಾಗತ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!