22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಾಲಾ ಕಾಲೇಜು

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಜೂ. 19ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪೋಷಕರ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭಾ ವೇದಿಕೆಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಗಣಿತ ತಜ್ಞ ಹಾಗೂ ಪ್ರಸಕ್ತ ಕಾಯರ್ತಡ್ಕ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಾಕೂಬ್ ಎಸ್ ಕೊಯ್ಯೂರು, ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಪೋಷಕರೊಂದಿಗೆ ಸಂವಾದ ನಡೆಸಿದ ಯಾಕೂಬ್ ರವರು ಮಕ್ಕಳ ನಡತೆಯನ್ನು ಸರಿಪಡಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು, ಎಂತಹ ವ್ಯಕ್ತಿಯನ್ನು ಬದಲಿಸುವ ಶಕ್ತಿ ತಾಯಿಗಿದೆ, ಅನೇಕ ಸಾಧಕರು ಸಾಗಿದ ಕಷ್ಟದ ಹಾದಿಯನ್ನು ಮಕ್ಕಳಿಗೆ ತಿಳಿಸಿ ಕಷ್ಟದ ಬದುಕಿನ ಅರಿವನ್ನು ಮೂಡಿಸಬೇಕು ಎಂದು ಹಲವಾರು ಉದಾಹರಣೆಗಳ ಮೂಲಕ ಪೋಷಕರಿಗೆ ಮನವರಿಕೆ ಮಾಡಿದರು.

2025-26 ನೇ ಸಾಲಿನ ಶಾಲಾ ವಾರ್ಷಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ರವರು ಮಕ್ಕಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಯನ್ನಾಗಿಸುವುದು ಪೋಷಕರ ಕೈಯಲ್ಲಿದೆ ಎಂಬುದನ್ನು ಪ್ರಾತ್ಯಕ್ಷಿಕ ಚಟುವಟಿಕೆಯ ಮೂಲಕ ಪೋಷಕರಿಗೆ ವಿವರಿಸಿ ಮಗುವನ್ನು ಸರಿಯಾದ ದಾರಿಯಲ್ಲಿ ಬೆಳೆಸುವಲ್ಲಿ ಪೋಷಕರಿಗೆ ಮತ್ತು ಶಿಕ್ಷಕರಿಗೆ ದೇವರು ಮಾರ್ಗದರ್ಶನವನ್ನು ಮಾಡಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಇವರು ಶಾಲಾ ಅರೇಬಿಕ್ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya
error: Content is protected !!