23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ ಸಖಿಯರಿಗೆ ಹಾಗೂ ಪ್ರಗತಿಪರ ರೈತರಿಗೆ ಎಣ್ಣೆ ತಾಳೆ ಬೆಳೆ ಬೇಸಾಯ ಹಾಗೂ ಇಲಾಖಾ ಯೋಜನೆಗಳ ಮಾಹಿತಿಯ ಮೆಗಾ ಡ್ರೈವ್ ಕಾರ್ಯಕ್ರಮ ಜೂ.19 ರಂದು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ನಡೆಯಿತು.

ಅಡಿಕೆ ಹಳದಿ ರೋಗ, ದರ ಕುಸಿತ , ಹವಾಮಾನ ವೈಪರೀತ್ಯದಿಂದ ಕೃಷಿಕರು ಹೈರಾಣಾದ ಬಳಿಕ ಪರ್ಯಾಯ ಬೆಳೆಯಾಗಿ ಕಾಫಿ ಕಾಳುಮೆಣಸು ಇನ್ನಿತರ ಬೆಳೆಗಳಂತೆ ತಾಳೆ ಬೆಳೆ ಪರಿಚಯವಾಗಿದ್ದು ತಾಳೆ ಬೇಸಾಯಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇತ್ತಿಚೀನ ದಿನಗಳಲ್ಲಿ ತಾಳೆ ಎಣ್ಣೆ ಬೆಲೆ ಏರಿಕೆಯಾಗಿ ಬೆಳೆಗಾರರಿಗೆ ಲಾಭದಾಯಕವಾಗಿದೆ. ಇದೀಗ ಹೊಸ ತಳಿ ತಾಳೆ ಬೆಳೆಯಲ್ಲಿ ಪರಿಚಯಿಸಲಾಗಿದೆ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಬೆಳ್ತಂಗಡಿ ತಾಳೆ ಬಾಳೆಗಾರರ ಸಂಘದ ಅಧ್ಯಕ್ಷ , ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಕೃಷ್ಣ ಭಟ್, 3ಎಫ್ ಆಯಿಲ್ ಪಾಮ್ ಕಂಪನಿಯ ಉಭಯ ಜಿಲ್ಲೆಗಳ ವ್ಯವಸ್ಥಾಪಕ ಕೃಷ್ಣ, ಪ್ರಗತಿಪರ ತಾಳೆ ಬಾಳೆಗಾರರ ಸುಂದರ್ ಶೆಟ್ಟಿ ಸುಲ್ಕೇರಿ, ಹೋಬಳಿ ತೋಟಗಾರಿಕಾ ಅಧಿಕಾರಿಗಳಾದ ಮಹಾವೀರ ಶೇಬಣ್ಣನವರ, ಮಂಜುನಾಥ್ ಬಿರಾದಾರ, ಭೀಮರಾಯ ಸೊಡ್ಡಗಿ, ಸಂಜೀವಿನಿ ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ವೀಣಾಶ್ರೀ, 3ಎಫ್ ಆಯಿಲ್ ಪಾಮ್ ಕಂಪನಿಯ ರಾಬರ್ಟ್ ಡಿಸೋಜ, ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya
error: Content is protected !!