23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಪಂಚಾಯತ್ ಬೆಳ್ತಂಗಡಿ ತೋಟಗಾರಿಕೆ ಇಲಾಖೆ , 3 ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀ ಭಾರತಿ ಎಣ್ಣೆ ತಾಳೆ ಬಾಳೆಗಾರರ ಸಹಕಾರಿ ಸಂಘ ಇದರ ಸಹಭಾಗಿತ್ವದಲ್ಲಿ ಕೃಷಿ ಸಖಿಯರಿಗೆ ಹಾಗೂ ಪ್ರಗತಿಪರ ರೈತರಿಗೆ ಎಣ್ಣೆ ತಾಳೆ ಬೆಳೆ ಬೇಸಾಯ ಹಾಗೂ ಇಲಾಖಾ ಯೋಜನೆಗಳ ಮಾಹಿತಿಯ ಮೆಗಾ ಡ್ರೈವ್ ಕಾರ್ಯಕ್ರಮ ಜೂ.19 ರಂದು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ನಡೆಯಿತು.

ಅಡಿಕೆ ಹಳದಿ ರೋಗ, ದರ ಕುಸಿತ , ಹವಾಮಾನ ವೈಪರೀತ್ಯದಿಂದ ಕೃಷಿಕರು ಹೈರಾಣಾದ ಬಳಿಕ ಪರ್ಯಾಯ ಬೆಳೆಯಾಗಿ ಕಾಫಿ ಕಾಳುಮೆಣಸು ಇನ್ನಿತರ ಬೆಳೆಗಳಂತೆ ತಾಳೆ ಬೆಳೆ ಪರಿಚಯವಾಗಿದ್ದು ತಾಳೆ ಬೇಸಾಯಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇತ್ತಿಚೀನ ದಿನಗಳಲ್ಲಿ ತಾಳೆ ಎಣ್ಣೆ ಬೆಲೆ ಏರಿಕೆಯಾಗಿ ಬೆಳೆಗಾರರಿಗೆ ಲಾಭದಾಯಕವಾಗಿದೆ. ಇದೀಗ ಹೊಸ ತಳಿ ತಾಳೆ ಬೆಳೆಯಲ್ಲಿ ಪರಿಚಯಿಸಲಾಗಿದೆ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್, ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಬೆಳ್ತಂಗಡಿ ತಾಳೆ ಬಾಳೆಗಾರರ ಸಂಘದ ಅಧ್ಯಕ್ಷ , ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕ ಶ್ರೀ ಕೃಷ್ಣ ಭಟ್, 3ಎಫ್ ಆಯಿಲ್ ಪಾಮ್ ಕಂಪನಿಯ ಉಭಯ ಜಿಲ್ಲೆಗಳ ವ್ಯವಸ್ಥಾಪಕ ಕೃಷ್ಣ, ಪ್ರಗತಿಪರ ತಾಳೆ ಬಾಳೆಗಾರರ ಸುಂದರ್ ಶೆಟ್ಟಿ ಸುಲ್ಕೇರಿ, ಹೋಬಳಿ ತೋಟಗಾರಿಕಾ ಅಧಿಕಾರಿಗಳಾದ ಮಹಾವೀರ ಶೇಬಣ್ಣನವರ, ಮಂಜುನಾಥ್ ಬಿರಾದಾರ, ಭೀಮರಾಯ ಸೊಡ್ಡಗಿ, ಸಂಜೀವಿನಿ ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ವೀಣಾಶ್ರೀ, 3ಎಫ್ ಆಯಿಲ್ ಪಾಮ್ ಕಂಪನಿಯ ರಾಬರ್ಟ್ ಡಿಸೋಜ, ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.

Related posts

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya
error: Content is protected !!