25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಮಾಲಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಮಾಲಾಡಿ ಸಹಕಾರದೊಂದಿಗೆ ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರು ಶ್ರೀಮತಿ ಹೇಮಾವತಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳೆಸಬೇಕು, ಅವಕಾಶ ಇರುವ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಹಣ್ಣಿನ ಗಿಡಗಳನ್ನು ನಾಟಿ ಮಾಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿಆಹಾರ ಸಿಗುವಂತೆ ಮಾಡಬೇಕು ಎಂದು ತಿಳಿಸಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಹಕೀಮ್ ಮಾತನಾಡಿ ನಾವೆಲ್ಲರೂ ಸೇರಿ ಗಿಡಗಳನ್ನು ನೆಟ್ಟು ಪರಿಸರದ ಮೌಲ್ಯವನ್ನು ಹೆಚ್ಚಿಸೋಣ, ಗಿಡ ಮರಗಳನ್ನು ನಾವು ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು. ಪರಿಸರ ಇದ್ದರೆ ನಾವು , ಇದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಪ್ರತಿಯೊಬ್ಬರು ತಮ್ಮ ಹುಟ್ಟುಹಬ್ಬದ ದಿನ ಗಿಡ ನಾಟಿ ಮಾಡಿ ಆಚರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಲತಾ ಕೆ, ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್ , ಸೇವಾಪ್ರತಿನಿಧಿ ಲಾನ್ಸಿ ಶಾಲಾ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು, ನಂತರ ಶಾಲಾ ಆವರಣದಲ್ಲಿ ಯಶಸ್ವಿಯಾಗಿ ಗಿಡ ನಾಟಿ ಮಾಡಲಾಯಿತು.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!