September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಮಾಲಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಮಾಲಾಡಿ ಸಹಕಾರದೊಂದಿಗೆ ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರು ಶ್ರೀಮತಿ ಹೇಮಾವತಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳೆಸಬೇಕು, ಅವಕಾಶ ಇರುವ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಹಣ್ಣಿನ ಗಿಡಗಳನ್ನು ನಾಟಿ ಮಾಡಿ ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿಆಹಾರ ಸಿಗುವಂತೆ ಮಾಡಬೇಕು ಎಂದು ತಿಳಿಸಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಹಕೀಮ್ ಮಾತನಾಡಿ ನಾವೆಲ್ಲರೂ ಸೇರಿ ಗಿಡಗಳನ್ನು ನೆಟ್ಟು ಪರಿಸರದ ಮೌಲ್ಯವನ್ನು ಹೆಚ್ಚಿಸೋಣ, ಗಿಡ ಮರಗಳನ್ನು ನಾವು ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು. ಪರಿಸರ ಇದ್ದರೆ ನಾವು , ಇದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಪ್ರತಿಯೊಬ್ಬರು ತಮ್ಮ ಹುಟ್ಟುಹಬ್ಬದ ದಿನ ಗಿಡ ನಾಟಿ ಮಾಡಿ ಆಚರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಲತಾ ಕೆ, ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್ , ಸೇವಾಪ್ರತಿನಿಧಿ ಲಾನ್ಸಿ ಶಾಲಾ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು, ನಂತರ ಶಾಲಾ ಆವರಣದಲ್ಲಿ ಯಶಸ್ವಿಯಾಗಿ ಗಿಡ ನಾಟಿ ಮಾಡಲಾಯಿತು.

Related posts

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya
error: Content is protected !!