July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ಅವರ ಕವನ ಸಂಕಲನ ದರ್ಪಣ ಬಿಡುಗಡೆ ಕಾರ್ಯಕ್ರಮ ಮುಂಡಾಜೆ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜೂ. 19 ನಡೆಯಿತು.

ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್
ಕಳೆದ ಮೂರು ವರ್ಷಗಳಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ನೂರಕ್ಕಿಂತ ಅಧಿಕ ಪುಸ್ತಕಗಳನ್ನು ಬಿಡುಗಡೆಗೊಳಿಸುವ ಮೂಲಕ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿರುವ ಜತೆ ಅನೇಕ ಎಲೆಮರೆಯ ಕಾಯಿಗಳನ್ನು ಗುರುತಿಸಲಾಗಿದೆ. ವಿದ್ಯಾರ್ಥಿಗಳಿರುವಲ್ಲಿ ಸಾಹಿತ್ಯ ಪರಿಷತ್ತು ಹೋಗುವ ಧ್ಯೇಯ ಹೊಂದಿದ್ದು ವಿದ್ಯಾರ್ಥಿಗಳಿಗೆ ಸಾಹಿತ್ಯ ಅಭಿರುಚಿ ಮೂಡಿಸುವ ಯತ್ನ ನಡೆದಿದೆ.ಎಲ್ಲಾ ರಂಗಗಳಲ್ಲೂ ಹಿರಿಯರ ಅನುಭವ,ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಅಗತ್ಯ ಎಂದರು.

ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ ಮಾತನಾಡಿ ಸಾಹಿತ್ಯ ಸಮಾಜಕ್ಕೆ ಮಾರ್ಗದರ್ಶನ ನೀಡುವುದಲ್ಲದೆ ನೆಮ್ಮದಿ,ಆಧುನಿಕತೆಗೆ ಕಾರಣವಾಗಿದೆ.
ಮುಂಡಾಜೆ ಅನೇಕ ಕಲಾವಿದರ ತವರೂರು.ಇಲ್ಲಿಯೂ 3ಬಾರಿ ಸಾಹಿತ್ಯ ಸಮ್ಮೇಳನ ನಡೆದಿರುವುದು ಹೆಮ್ಮೆಯ ವಿಚಾರ.
ತಾಲೂಕು ಘಟಕದ ಅಧ್ಯಕ್ಷ ಯದುಪತಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಹಿತ್ಯ ಬದುಕಿಗೆ,ಮಾನಸಿಕ ಸಂತಸಕ್ಕೆ ಮುಖ್ಯ.ಪುಸ್ತಕಗಳು ಸಮಾಜದ ಪ್ರತಿಬಿಂಬ ಎಂದರು.


ಎಸ್ ಡಿಎಂ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ದಿವಾ ಕೊಕ್ಕಡ,ಮುಂಡಾಜೆ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಉಪಸ್ಥಿತರಿದ್ದರು.
ಕವಯತ್ರಿ ಪದ್ಮಾ ಪಿ. ಬೇಡಕರ್ ಅವರನ್ನು ಗೌರವಿಸಲಾಯಿತು. ಉಪನ್ಯಾಸಕಿ ಸ್ಮಿತಾ ಬೇಡೇಕರ್ ಕಾರ್ಯಕ್ರಮ ನಿರೂಪಿಸಿದರು.
ಶಿವಾನಿ ಸ್ವಾಗತಿಸಿದರು. ಶರ್ವಾಣಿ ವಂದಿಸಿದರು.

Related posts

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!