25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

ಬೆಳ್ತಂಗಡಿ: ವೃತ್ತಿಪರ ಕೌಶಲ್ಯ ಶಿಕ್ಷಣದ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅನುಗ್ರಹ ಎಜುಕೇಶನ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು ತನ್ನ ವಿಶಿಷ್ಟ ಸೇವಾ ಪ್ರಯಾಣದ ಮತ್ತೊಂದು ಮೈಲಿಗಲ್ಲು ತಲುಪಿದೆ. ಎಂ.ಜಿ.ತಲ್ಹತ್ ಸವಣಾಲು ಅವರ ಪ್ರೇರಣಾದಾಯಕ ನೇತೃತ್ವದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ಕೊನೆಗೊಳ್ಳುವುದರ ಒಳಗೆ ಇಂಟರ್ನ್ ಶಿಪ್ ತರಬೇತಿಯೊಂದಿಗೆ ಉದ್ಯೋಗ ಲಭಿಸಿದೆ. ಕಾಲೇಜಿನ ಡಿಪ್ಲೋಮಾ ಇನ್ ಫ್ಯಾಷನ್ ಡಿಸೈನಿಂಗ್ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ದೇಶದ ಖ್ಯಾತ ಕಂಪನಿಯಾಗಿರುವ Shahi Exports Pvt Ltd ನಲ್ಲಿ ಟ್ರೈನಿಯಾಗಿ ಇಂಟರ್ನ್ ಶಿಪ್‌ ಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಲೇಜಿನ ಎ.ಸಿ. ಮತ್ತು ರೆಫ್ರಿಜರೇಟರ್ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ಕ್ಯಾಂಪಸ್ ಸೆಲೆಕ್ಷನ್ ಮೂಲಕ ಮೂಲಕ ದೇಶದ ಪ್ರಮುಖ ಎ.ಸಿ. ಕಂಪನಿಗಳಲ್ಲಿ ಉದ್ಯೋಗ ಪಡೆದು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅನುಗ್ರಹ ಟ್ರೈನಿಂಗ್ ಕಾಲೇಜು ನಿರ್ದೇಶಕರಾದ ಮಹಮ್ಮದ್ ತೌಸೀಫ್ ಕಕ್ಕಿಂಜೆ ಮತ್ತು ಅಬ್ದುಲ್ ಖಾದರ್ ನಾವೂರು ಅವರ ಮಾರ್ಗದರ್ಶನದಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಸುಮಾರು 15 ವರ್ಷಗಳಿಂದ ಬಹಳಷ್ಟು ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಿ ಉದ್ಯೋಗದ ದಾರಿಯನ್ನು ತೆರೆದಿದೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೇವಲ ತಾಂತ್ರಿಕ ತರಬೇತಿ ಮಾತ್ರವಲ್ಲದೆ, ಕಂಪ್ಯೂಟರ್, ಇಂಗ್ಲಿಷ್ ಸ್ಪೀಕಿಂಗ್, ಕಮ್ಯೂನಿಕೇಷನ್ ಸ್ಕಿಲ್ಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನೂ ನೀಡಲಾಗುತ್ತಿದ್ದು, ಧೈರ್ಯ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ವೃದ್ಧಿಸುತ್ತಿದೆ.

ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಪೂರೈಸಿದ ವಿದ್ಯಾರ್ಥಿಗಳು ದೇಶ ಹಾಗೂ ವಿದೇಶಗಳಲ್ಲಿ ಉತ್ತಮ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿದ್ದು, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಈ ಸಂಸ್ಥೆ ಹತ್ತಿರವಾಗಿದೆ. ಅವರಿಗೂ ಕಡಿಮೆ ಶುಲ್ಕದಲ್ಲಿ ಡಿಪ್ಲೋಮಾ ಹಾಗೂ ಪಿಜಿ ಡಿಪ್ಲೋಮಾ ತರಬೇತಿಗಳನ್ನು ನೀಡುತ್ತಿದ್ದು, ಉದ್ಯೋಗ ಅಥವಾ ಸ್ವಾವಲಂಬನೆಗೆ ಪ್ರೇರಣೆ ನೀಡುತ್ತಿದೆ.

ಕಾಲೇಜಿನಲ್ಲಿ ಲಭ್ಯವಿರುವ ಪ್ರಮುಖ ಕೋರ್ಸ್ ಗಳು: ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್, ಡಿಪ್ಲೋಮಾ ಟೀಚರ್ಸ್ ಟ್ರೈನಿಂಗ್, ಡಿಪ್ಲೋಮಾ ಎಸಿ ಮತ್ತು ರೆಫ್ರಿಜಿರೇಟರ್ ಮೆಕ್ಯಾನಿಕ್, ಡಿಪ್ಲೋಮಾ ಫೈರ್ ಅಂಡ್ ಸೇಫ್ಟಿ, ಏರೋನಾಟಿಕಲ್ & ಮರೈನ್ ಸೇಫ್ಟಿ ಇಂಜಿನಿಯರಿಂಗ್. ಈ ಕೋರ್ಸ್ ಗಳು ಬೆಳ್ತಂಗಡಿಯ ಶ್ರೀರಾಮ ಕಾಂಪ್ಲೆಕ್ಸ್ (ಸಂತೆಕಟ್ಟೆ) ಮತ್ತು ಮಂಗಳೂರು – ಮುಡಿಪು ಎಸ್. ಕೆ.ಟವರ್ ನ ಕಾಲೇಜಿನಲ್ಲಿದ್ದು, ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಿ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8861112182/8431882182 ಗೆ ಕರೆಮಾಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!