23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು.

ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಬಂಡೀಪುರದ ಸಂಪನ್ಮೂಲ ವ್ಯಕ್ತಿಯಾಗಿ ರೋನಿತ್ ನಂಜಪ್ಪ ಮಾಹಿತಿ ನೀಡಿದರು. ಟ್ರೆಕ್ಕಿಂಗ್ ಗೈಡ್ ಗಳ ಸಂವಹನ ಕೌಶಲ್ಯ ಹಾಗೂ ರಾಷ್ಟ್ರೀಯ ಉದ್ಯಮನದ ಕುದುರೆಮುಖದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಜೂ. 24 25 ರಂದು ಟ್ರೆಕ್ಕಿಂಗ್ ಗೈಡ್ ಗಳ ತರಬೇತಿ ಕಾರ್ಯ ನಡೆಯಲಿದೆ.

ಈ ಸಂದರ್ಭದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಂ ಬಾಬು , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., , ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿ. ಶರ್ಮಿಷ್ಮಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya
error: Content is protected !!