September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು.

ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಬಂಡೀಪುರದ ಸಂಪನ್ಮೂಲ ವ್ಯಕ್ತಿಯಾಗಿ ರೋನಿತ್ ನಂಜಪ್ಪ ಮಾಹಿತಿ ನೀಡಿದರು. ಟ್ರೆಕ್ಕಿಂಗ್ ಗೈಡ್ ಗಳ ಸಂವಹನ ಕೌಶಲ್ಯ ಹಾಗೂ ರಾಷ್ಟ್ರೀಯ ಉದ್ಯಮನದ ಕುದುರೆಮುಖದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಜೂ. 24 25 ರಂದು ಟ್ರೆಕ್ಕಿಂಗ್ ಗೈಡ್ ಗಳ ತರಬೇತಿ ಕಾರ್ಯ ನಡೆಯಲಿದೆ.

ಈ ಸಂದರ್ಭದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಂ ಬಾಬು , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., , ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿ. ಶರ್ಮಿಷ್ಮಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya
error: Content is protected !!