July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

ಬೆಳ್ತಂಗಡಿ: ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದಿಂದ ಟ್ರೆಕ್ಕಿಂಗ್ ಗೈಡ್ ತರಬೇತಿ ಕಾರ್ಯಕ್ರಮ ಜೂ.17 ಮತ್ತು 18 ರಂದು ಕುದುರೆಮುಖ ಪದ್ಮಾವತಿ ದೇವಸ್ಥಾನದ ಹಾಲ್ ನಲ್ಲಿ ನಡೆಯಿತು.

ಗೈಡ್ ಗಳ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು ತರಬೇತಿಯು ಮುಖ್ಯ ಉದ್ದೇಶವಾಗಿತ್ತು. ತರಬೇತಿಯಲ್ಲಿ ಕುದುರೆಮುಖದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ವಿವರಿಸುವ ಕೌಶಲ್ಯ ಅಭಿವೃದ್ಧಿ ಪಡಿಸಲಾಯಿತು. ತರಬೇತಿ ಕಾರ್ಯಾಗಾರಕ್ಕೆ ಹಾಜರಾದ ಗೈಡ್ ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಬಂಡೀಪುರದ ಸಂಪನ್ಮೂಲ ವ್ಯಕ್ತಿಯಾಗಿ ರೋನಿತ್ ನಂಜಪ್ಪ ಮಾಹಿತಿ ನೀಡಿದರು. ಟ್ರೆಕ್ಕಿಂಗ್ ಗೈಡ್ ಗಳ ಸಂವಹನ ಕೌಶಲ್ಯ ಹಾಗೂ ರಾಷ್ಟ್ರೀಯ ಉದ್ಯಮನದ ಕುದುರೆಮುಖದ ಪ್ರಾಮುಖ್ಯತೆಯನ್ನು ತಿಳಿಸಲಾಯಿತು. ಬಳಿಕ ಪ್ರಮಾಣ ಪತ್ರ ನೀಡಲಾಯಿತು. ಜೂ. 24 25 ರಂದು ಟ್ರೆಕ್ಕಿಂಗ್ ಗೈಡ್ ಗಳ ತರಬೇತಿ ಕಾರ್ಯ ನಡೆಯಲಿದೆ.

ಈ ಸಂದರ್ಭದಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಂ ಬಾಬು , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್., , ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ವಿ. ಶರ್ಮಿಷ್ಮಾ, ಕುದುರೆಮುಖ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಚೇತನ್ ಕುಮಾರ್ ಮತ್ತು ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಪಾಟೀಲ್ ಉಪಸ್ಥಿತರಿದ್ದರು.

Related posts

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya
error: Content is protected !!