ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.
“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಉಜಿರೆ ನ್ಯಾಚುರೋಪತಿ ಕಾಲೇಜು ಪ್ರೊ| ಡಾ. ಹರ್ಷಿಣಿ ಉದ್ಘಾಟನೆಯನ್ನು ಮಾಡಿ ಮಾತನಾಡಿ ಪರಿಸರದಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಮತ್ತು ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉಂಟಾಗುವ ಪ್ರಯೋಜನಗಳನ್ನು ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ರಜಪೂತ್ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ. ಕೀರ್ತನ ಮತ್ತು ಡಾ. ವೈಷ್ಣವಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಸೀಮಾ ವಂದಿಸಿದರು. ದೈಹಿಕ ಶಿಕ್ಷಕ ಸಂಜೀವ ಕೆ ಕಾರ್ಯಕ್ರಮ ಸಂಘಟಿಸಿದರು.











