23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು ಶಾಂತಿ ಸ್ವಸಹಾಯ ಸಂಘದ ವತಿಯಿಂದ ವಿತರಿಸಲಾಯಿತು.

ಜೊತೆಗೆ ಹೊಸದಾಗಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸ್ವಸಹಾಯ ಸಂಘದ ಸದಸ್ಯರು ಪ್ರಾಯೋಜಿಸಿದರು. ಸ್ವಸಹಾಯ ಸಂಘದ ಅಧ್ಯಕ್ಷ ವಿಜಯಕುಮಾರ್ , ಕಾರ್ಯದರ್ಶಿ ರಾಜು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಶಾಲಾ ಶುಲ್ಕವನ್ನು ನೀಡಿ ಶುಭ ಹಾರೈಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಶಾಂತಿ ಸ್ವಸಹಾಯ ಸಂಘದ ಸದಸ್ಯರ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.

ವಿಜಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ಉದಯಕುಮಾರ್ ವಂದಿಸಿದರು.
ಸಂಸ್ಥೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya
error: Content is protected !!