23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು ಶಾಂತಿ ಸ್ವಸಹಾಯ ಸಂಘದ ವತಿಯಿಂದ ವಿತರಿಸಲಾಯಿತು.

ಜೊತೆಗೆ ಹೊಸದಾಗಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಸ್ವಸಹಾಯ ಸಂಘದ ಸದಸ್ಯರು ಪ್ರಾಯೋಜಿಸಿದರು. ಸ್ವಸಹಾಯ ಸಂಘದ ಅಧ್ಯಕ್ಷ ವಿಜಯಕುಮಾರ್ , ಕಾರ್ಯದರ್ಶಿ ರಾಜು ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಶಾಲಾ ಶುಲ್ಕವನ್ನು ನೀಡಿ ಶುಭ ಹಾರೈಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಶಾಂತಿ ಸ್ವಸಹಾಯ ಸಂಘದ ಸದಸ್ಯರ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿದರು.

ವಿಜಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ಉದಯಕುಮಾರ್ ವಂದಿಸಿದರು.
ಸಂಸ್ಥೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya
error: Content is protected !!